WhatsApp Group Join Now
Telegram Group Join Now
Instagram Group Join Now

ಏನಿದು ಸಿಂಧು ನದಿ ಒಪ್ಪಂದ? ಪಾಕಿಸ್ತಾನಕ್ಕೆ ಹೀಗ ತಳಮಳ ಇದು ಪಾಕಿಸ್ತಾನ ಕಳೆದುಕೊಂಡ ಕೊನೆಯ ಅನುಬಂಧ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ, ಭಾರತ ಮತ್ತು ಪಾಕಿಸ್ತಾನ ನಡುವೆ ಅಲ್ಪಸ್ವಲ್ಪ ಉಸಿರಾಡುತ್ತಿದ್ದ ರಾಜತಾಂತ್ರಿಕ ಸಂಬಂಧವನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ. ಪಹಲ್ಗಾಮ್‌ ದಾಳಿಯಲ್ಲಿ ತನ್ನ ಪಾತ್ರವಿಲ್ಲ ಎಂದು ಪಾಕಿಸ್ತಾನ ಹೇಳಿದ್ದರೂ, ಅದರ ಪಾತ್ರವನ್ನು ಸಾಬೀತುಪಡಿಸುವ ಹಲವಾರು ಪುರಾವೆಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಒಟ್ಟು ಐದು ಕಠಿಣ ಕ್ರಮಗಳನ್ನು ಭಾರತ ಘೋಷಿಸಿದೆ. ಈ ಪೈಕಿ ಸಿಂಧು ನದಿ ಒಪ್ಪಂದ ಕೂಡ ಒಂದಾಗಿದ್ದು, ಈ ಒಪ್ಪಂದದ ಸಂಪೂರ್ಣ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಮುಖ್ಯ ವಿಷಯ

  • ಪಾಕಿಸ್ತಾನದ ಪಾಲಿಗೆ ದುಸ್ವಪ್ನವಾದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ
  • ಸಿಂಧು ನದಿ ಒಪ್ಪಂದವನ್ನುಅಮಾನತುಗೊಳಿಸಿ ಪಾಕಿಸ್ತಾನಕ್ಕೆ ಶಾಕ್‌ ನೀಡಿದ ಭಾರತ
  • ಸಿಂಧು ನದಿ ಒಪ್ಪಂದದ ಇತಿಹಾಸ, ಭಾರತ-ಪಾಕಿಸ್ತಾನ ಸಂಬಂಧಕ್ಕೆ ಈ ಒಪ್ಪಂದ ನೀಡಿದ ಕೊಡುಗೆಯ ವಿವರ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಉಗ್ರರ ದಾಳಿ, ಭಾರತ-ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಮತ್ತಷ್ಟು ದುರ್ಬಲಗೊಳಿಸಿದೆ. ಉಭಯ ದೇಶಗಳ ನಡುವೆ ಅಲ್ಪ-ಸ್ವಲ್ಪ ಉಸಿರಾಡುತ್ತಿದ್ದ ಸಂಬಂಧ ಇದೀಗ ಪೂರ್ತಿಯಾಗಿ ಹಳಸಿದ್ದು, ಇದಕ್ಕೆ ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ಭಾರತ ಕೈಗೊಂಡ ಹಲವು ಕಠಿಣ ಕ್ರಮಗಳು ಸಾಕ್ಷಿಯಾಗಿವೆ.

ಹೌದು, ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ಒಟ್ಟು ಐದು ಕಠಿಣ ಕ್ರಮಗಳನ್ನು ಭಾರತ ಘೋಷಿಸಿದೆ. ಇದರಲ್ಲಿ ಅತ್ಯಂತ ಪ್ರಮುಖವಾದದ್ದು ಸಿಂಧು ನದಿ ಒಪ್ಪಂದವನ್ನು ಅಮಾನತುಗೊಳಿಸುವ ನಿರ್ಧಾರ. ಅತ್ಯಂತ ಮಹತ್ವದ್ದಾಗಿದ್ದು, ಭಾರತದ ಈ ಕಠಿಣ ನಿರ್ಧಾರ ಪಾಕಿಸ್ತಾನದ ನಿದ್ದೆಗೆಡೆಸಿದೆ. ಗಡಿ ನದಿಗಳ ನೀರಿನ ಬಳಕೆಯ ಬಗ್ಗೆ ಎರಡೂ ಕಡೆಯವರು ಸಹಕರಿಸಲು ಮತ್ತು ಮಾಹಿತಿ ಹಂಚಿಕೊಳ್ಳಲು ಅತ್ಯಂತ ಉಪಯುಕ್ತವಾಗಿದ್ದ ಸಿಂಧು ನದಿ ಒಪ್ಪಂದವನ್ನು ಭಾರತ ಅಮಾನತುಗೊಳಿಸಿರುವುದು, ಪಾಕಿಸ್ತಾನದ ಪಾಲಿಗೆ ಭಾರೀ ಸಂಕಷ್ಟಗಳನ್ನು ತಂದೊಡ್ಡಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವೆ 1960ರ ಸೆಪ್ಟೆಂಬರ್ 19ರಂದು ಜಾರಿಗೆ ಬಂದಿದ್ದ ಸಿಂಧು ನದಿ ಒಪ್ಪಂದ ಇದೀಗ ರದ್ದಾಗಿದೆ. ಹಾಗಿದ್ದರೆ ಏನಿದು ಸಿಂಧು ನದಿ ಒಪ್ಪಂದ? ಈ ಒಪ್ಪಂದದಲ್ಲಿದ್ದ ಅಂಶಗಳೇನು? ಸಿಂಧು ನದಿ ಒಪ್ಪಂದ ಹೇಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನು ಸಾರುವ ಕೊನೆಯ ಕೊಂಡಿಯಾಗಿ ಉಳಿದುಕೊಂಡಿತ್ತು? ಎಂಬಿತ್ಯಾದಿ ವಿವರಗಳ ಬಗ್ಗೆ ಇಲ್ಲಿ ಮಾಹಿತಿ ಕೊಡಲಾಗಿದೆ…

ಸಿಂದು ನದಿ ಒಪ್ಪಂದ

1. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ 1960ರಲ್ಲಿ ಸಹಿ ಹಾಕಲಾಯಿತು. ಸುದೀರ್ಘ 9 ವರ್ಷಗಳ ಕಾಲ ನಡೆದ ಮಾತುಕತೆಗಳ ಬಳಿಕ, ಉಭಯ ದೇಶಗಳು ಈ ಒಪ್ಪಂದಕ್ಕೆ ತಮ್ಮ ಸಮ್ಮತಿ ಸೂಚಿಸಿದ್ದವು. ವಿಶ್ವ ಬ್ಯಾಂಕ್ ಸಿಂಧು ನದಿ ಒಪ್ಪಂದಕ್ಕೆ
ಸಾಕ್ಷಿಯಾಗಿದೆ.

ಸಿಂಧು ನದಿ ಒಪ್ಪಂದವು ಭಾರತ-ಪಾಕಿಸ್ತಾನ ದೇಶಗಳು ಈ ನದಿ ನೀರನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನು ರೂಪಿಸುತ್ತದೆ. ಗಡಿಯಾಚೆಗಿನ ನದಿಗಳ ನೀರಿನ ಬಳಕೆಯ ಕುರಿತು ಎರಡೂ ಕಡೆಯವರ ನಡುವೆ ಸಹಕಾರ ಮತ್ತು ಮಾಹಿತಿ ವಿನಿಮಯಕ್ಕಾಗಿ ಒಂದು ಕಾರ್ಯವಿಧಾನವನ್ನು ರೂಪಿಸುತ್ತದೆ.

ಒಪ್ಪಂದದ ಪ್ರಕಾರ, ಪೂರ್ವದ ನದಿಗಳ ನೀರನ್ನು ಭಾರತವು ಬಳಸಿಕೊಳ್ಳಬಹುದು. ಪಶ್ಚಿಮದ ನದಿಗಳ ನೀರನ್ನು ಪಾಕಿಸ್ತಾನವು ಹೆಚ್ಚಾಗಿ ಬಳಸುತ್ತದೆ. ಭಾರತವು ಪಶ್ಚಿಮ ನದಿಗಳ ಮೇಲೆ ಜಲವಿದ್ಯುತ್ ಯೋಜನೆಗಳನ್ನು ನಿರ್ಮಿಸಬಹುದು. ಆದರೆ, ಕೆಲವು ನಿಯಮಗಳನ್ನು ಪಾಲಿಸಬೇಕು. ಪಾಕಿಸ್ತಾನವು ಭಾರತದ ಯೋಜನೆಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು..

ಭಾರತ ಸರ್ಕಾರ ಮತ್ತು ಪಾಕಿಸ್ತಾನ ಸರ್ಕಾರವು ಸಿಂಧೂ ನದಿ ವ್ಯವಸ್ಥೆಯ ನೀರನ್ನು ಸಂಪೂರ್ಣವಾಗಿ ಮತ್ತು ತೃಪ್ತಿಕರವಾಗಿ ಬಳಸಲು ಬಯಸುತ್ತವೆ. ಈ ನಿಟ್ಟಿನಲ್ಲಿ, ಪರಸ್ಪರ ಸ್ನೇಹ ಮತ್ತು ಸೌಹಾರ್ದತೆಯಿಂದ ಹಕ್ಕುಗಳು ಮತ್ತು ಕಟ್ಟುಪಾಡುಗಳನ್ನು ನಿರ್ಧರಿಸಲು ಮತ್ತು ಈ ಒಪ್ಪಂದದ ವ್ಯಾಖ್ಯಾನ ಅಥವಾ ಅನ್ವಯಕ್ಕೆ ಸಂಬಂಧಿಸಿದಂತೆ ಉದ್ಭವಿಸುವ ಎಲ್ಲಾ ಪ್ರಶ್ನೆಗಳನ್ನು ಸಹಕಾರ ಮನೋಭಾವದಿಂದ ಇತ್ಯರ್ಥಪಡಿಸಲು ನಿರ್ಧರಿಸಿವೆ. ಈ ಉದ್ದೇಶಗಳನ್ನು ಈಡೇರಿಸಲು ಒಂದು ಒಪ್ಪಂದವನ್ನು ತೀರ್ಮಾನಿಸಲು ನಿರ್ಧರಿಸಲಾಗಿದೆ” ಎಂದು ಸಿಂಧು ನದಿ ಒಪ್ಪಂದದ ಪ್ರಸ್ತಾವನೆಯಲ್ಲಿ ಹೇಳಲಾಗಿದೆ..

ಸಿಂಧು ನದಿ ಒಪ್ಪಂದಕ್ಕೆ ಭಾರತದ ಪ್ರಥಮ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಮೊಹಮ್ಮದ್ ಆಯುಬ್ ಖಾನ್ ಸಹಿ ಹಾಕಿದ್ದರು.

ಒಪ್ಪಂದದ ಪ್ರಕಾರ, ಉಭಯ ದೇಶಗಳ ಆಯುಕ್ತರು ವರ್ಷಕ್ಕೊಮ್ಮೆಯಾದರೂ ಭೇಟಿಯಾಗಬೇಕು. ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ 2020ರಲ್ಲಿ ನಡೆಯಬೇಕಿದ್ದ ಸಭೆ ರದ್ದಾಯಿತು. ಈ ಒಪ್ಪಂದವನ್ನು ಎರಡೂ ಸರ್ಕಾರಗಳು ತಿದ್ದುಪಡಿ ಮಾಡುವ ಅಧಿಕಾರವನ್ನು ಹೊಂದಿವೆ.

ಸಿಂಧು ನದಿ ಒಪ್ಪಂದದನ್ವಯ ಭಾರತಕ್ಕೆ ಪೂರ್ವ ನದಿಗಳಾದ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳ ನೀರನ್ನು ಬಳಸುವ ಹಕ್ಕಿದೆ. ಇದು ಸುಮಾರು 33 ಮಿಲಿಯನ್‌ ಎಕರೆ ಫೀಟ್ (MAF)ನಷ್ಟು ನೀರನ್ನು ಬಳಸಬಹುದಾಗಿದೆ. ಅದೇ ರೀತಿ ಪಾಕಿಸ್ತಾನಕ್ಕೆ ಪಶ್ಚಿಮ ನದಿಗಳಾದ ಸಿಂಧೂ, ಝೀಲಂ ಮತ್ತು ಚೆನಾಬ್ ನದಿಗಳ ನೀರನ್ನು ಬಳಸುವ ಹಕ್ಕಿದೆ. ಇದು ಸುಮಾರು 135 ಮಿಲಿಯನ್‌ ಎಕರೆ ಫೀಟ್ (MAF)‌ ನೀರನ್ನು ಬಳಸಿಕೊಳ್ಳುತ್ತದೆ.

ಭಾರತವು ಪಶ್ಚಿಮ ನದಿಗಳ ಮೇಲೆ ಜಲವಿದ್ಯುತ್ ಯೋಜನೆಗಳನ್ನು ನಿರ್ಮಿಸಬಹುದು. ಆದರೆ ಕೆಲವು ನಿಯಮಗಳನ್ನು ಪಾಲಿಸಬೇಕು. ಈ ಯೋಜನೆಗಳು ನದಿಯ ಹರಿವನ್ನು ಬದಲಾಯಿಸಬಾರದು.

ಭಾರತದ ಜಲವಿದ್ಯುತ್ ಯೋಜನೆಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಹಕ್ಕನ್ನು ಪಾಕಿಸ್ತಾನ ಹೊಂದಿದೆ. ಅಲ್ಲದೇ ಈ ಆಕ್ಷೇಪಣೆಗಳನ್ನು ಪರಿಶೀಲಿಸಲು ಒಂದು ತಾಂತ್ರಿಕ ಸಮಿತಿಯನ್ನು ರಚಿಸಲಾಗುತ್ತದೆ. ಸಮಿತಿಯ ತೀರ್ಮಾನವನ್ನು ಎರಡೂ ದೇಶಗಳು ಒಪ್ಪಿಕೊಳ್ಳಬೇಕು.

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವು ಭಾರತ ಮತ್ತು ಪಾಕಿಸ್ತಾನದ ನಡುವಿನ ಒಂದು ಪ್ರಮುಖ ಒಪ್ಪಂದವಾಗಿದೆ. ಈ ಒಪ್ಪಂದವು ಎರಡೂ ದೇಶಗಳ ನಡುವೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಸಹಾಯ ಮಾಡಿದೆ. ಈ ಒಪ್ಪಂದದ ಬಗ್ಗೆ ಯಾವುದೇ ಸಮಸ್ಯೆಗಳಿದ್ದರೆ, ಎರಡೂ ದೇಶಗಳು ಮಾತುಕತೆಗಳ ಮೂಲಕ ಪರಿಹರಿಸಿಕೊಳ್ಳಬೇಕು. ವಿಶ್ವ ಬ್ಯಾಂಕ್ ಕೂಡ ಈ ವಿಷಯದಲ್ಲಿ ಸಹಾಯ ಮಾಡಬಹುದು.

ಒಟ್ಟಿನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವು ಸಂಕೀರ್ಣವಾಗಿದೆ. ಆದರೆ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವು ಎರಡೂ ದೇಶಗಳು ಸಹಕರಿಸಲು ಸಾಧ್ಯ ಎಂಬುದನ್ನು ತೋರಿಸುತ್ತದೆ. ಆದರೆ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಪಾಕಿಸ್ತಾನ ಈ ಸಾಧ್ಯತೆಯನ್ನೂ ಇಲ್ಲವಾಗಿಸಿದ್ದು, ಮುಂದಿನ ದಿನಗಳು ಮತ್ತಷ್ಟು ಕಠಿಣವಾಗಿರಲಿವೆ ಎಂಬುದು ಸ್ಪಷ್ಟವಾಗುತ್ತಿದೆ.

Leave a Reply

Discover more from HOME

Subscribe now to keep reading and get access to the full archive.

Continue reading

Discover more from HOME

Subscribe now to keep reading and get access to the full archive.

Continue reading